ಕನ್ನಡಾಂಬೆ ಭುವನೇಶ್ವರಿ ದೇವಾಲಯದ ಬಗ್ಗೆ ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯಿದೆ.
ಪೌರಾಣಿಕ
ಹಿನ್ನೆಲೆ: ಇಲ್ಲಿನ ದಟ್ಟ ಕಾನನದಲ್ಲಿ ಭುವನಾಸುರನೆಂಬ ಒಬ್ಬ ರಾಕ್ಷಸನಿದ್ದನಂತೆ.
ಆತನ ಮಿತಿಮೀರಿದ ಉಪಟಳದಿಂದ ಜನರು ನೆಮ್ಮದಿಯಿಂದ ಬಾಳಲು ಆಗುತ್ತಿರಲಿಲ್ಲವಂತೆ. ಜನರ
ಪ್ರಾರ್ಥನೆಯನ್ನು ಕೇಳಿದ ದುರ್ಗಾಮಾತೆ ಪ್ರತ್ಯಕ್ಷಳಾಗಿ ಆತನನ್ನು ವಧಿಸಲು ಅಣಿಯಾದ ಸಮಯದಲ್ಲಿ
ತಾನು ಸದಾಕಾಲ ಜನರಿಗೆ ಪರಿಚಿತನಾಗಿರುವಂತಹ ವರವನ್ನು ದಯಪಾಲಿಸು ಎಂದು ಕೇಳಿದನಂತೆ. ತಥಾಸ್ತು
ಎಂದ ದುರ್ಗಾ ಮಾತೆಯು ಈ ಸ್ಥಳವು ಭುವನಗಿರಿಯೆಂದು ಕರೆಯಲ್ಪಡುವುದು ಮತ್ತು ನಾನು ಈ
ಕ್ಷೇತ್ರದಲ್ಲಿ ಭುವನೇಶ್ವರಿಯಾಗಿ ನೆಲೆಸಿ
ನಾಡನ್ನು ಕಾಯುತ್ತೇನೆ ಎಂದಳಂತೆ.
ವಿಜಯನಗರದ
ಅರಸರು ಸಹ ಮಾತೆ ಭುವನೇಶ್ವರಿಗೆ ವಂದಿಸಿಯೇ ತಮ್ಮ ಕೆಲಸ ಕಾರ್ಯಗಳನ್ನು ಆರಂಭಿಸುತ್ತಿದ್ದರು. ಈ
ಕಾರಣಕ್ಕಾಗಿ ಹಂಪಿಯ ವಿರೂಪಾಕ್ಷ ದೇವಾಲಯದಲ್ಲಿ ಭುವನೇಶ್ವರಿ ವಿಗ್ರಹವನ್ನು ಕಾಣಬಹುದು.